Thursday, August 28, 2008

ಮನಸಿಗೊಂದು ಬುದ್ದಿ ಮಾತು !!

ಅತಿಯಾಗಿ ನೀ ಎಲ್ಲರ ಹಚ್ಚಿಕೊಳ್ಳುವೆ ಏಕೆ?

ಮಿತಿ ಮೀರಿ ಮಾತಾಡುವೆ ಏಕೆ? ಅತಿ ಸುಕ್ಷ್ಮಿ ನೀ ಯಾಕಾದೆ?

ಮತ್ತೊಬ್ಬರ ಮಾತನು ನೀ ಯಾಕೆ ಅಪಾರ್ಥ ಮಾಡಿಕೊಳ್ಳುವೆ ?!

ನೀನೇಕೆ ದುಡುಕಿ ಮಾತಾಡಿ ನೋವ ನೀಡಿ ನೋವ ಏಕೆ ತಿನ್ನುವೆ ?!

ಓ ಮನಸೇ ನಿನ್ನ ಯೋಚನೆಯ ಲಹರಿಯ ಬದಲಾಯಿಸಿ ನೋಡು..


ನೀ ಕೊಂಚ ತಾಳ್ಮೆಯ ತಂದು ಕೊಂಡು

ನೋಡುವ ಭಾವನೆಯ ಬದಲಿಸಿ ನೋಡು...

ಜಗವೇ ಸುಂದರ ಎನಿಸದಿರದು....

ಮಾತಿನಲಿ ಜೇನ ಸಿಹಿ ಪಡೆವೆ

ನೋಟದಲಿ ಮೆಚ್ಚುಗೆಯ ಪಡೆವೆ

ಬಾಳೊಂದು ಸುಂದರ ಕಾವ್ಯ ಎನಿಸುವುದು .

4 comments:

  1. ತತ್ವಜ್ಞಾನಿ ಆಗುವ ಯೋಚನೆ/ಯೋಜನೆ??

    ReplyDelete
  2. @ಹರೀಶ
    ಹೌದು...
    ತತ್ವ ಜ್ಞಾನ ಎಂದರೆ ಏನು ಅಂತ ಹೇಳ್ತಿರೋ ಗುರುಗಳೇ??!!

    ReplyDelete
  3. ಒಳ್ಳೆಯ ವಿಷಯ

    ReplyDelete
  4. ಒಳ್ಳೆಯ ವಿಷಯ

    ReplyDelete

ಅನಿಸಿಕೆ ಬರೆಯುತ್ತಿರುವುದಕ್ಕೆ/ಬರೆದದ್ದಕ್ಕೆ ಧನ್ಯವಾದಗಳು..

ಕನ್ನಡದಲ್ಲಿ ಬರೆಯಲು ಸಹಾಯ ಬೇಕಿದ್ದರೆ ಇಲ್ಲಿ ಕ್ಲಿಕ್ಕಿಸಿ ಗೂಗಲ್ ನ ಇಂಗ್ಲೀಷ್ನಿಂದ ಕನ್ನಡಕ್ಕೆ Translate ಆಗುವ google transliterate ಪುಟಕ್ಕೆ ತೆರಳಿ ಅಥವಾ ಕನ್ನಡ ಸ್ಲೇಟ್ ಅಲ್ಲಿ ಕಮೆಂಟನ್ನು ಬರೆದು ಕಾಪಿ ಮಾಡಿಕೊಂಡು ಅಲ್ಲಿಂದ ಮತ್ತೆ ಈ ಪುಟಕ್ಕೆ ಮರಳಲು back ಬಟನ್ನನ್ನು ಕ್ಲಿಕ್ಕಿಸಿ ಇಲ್ಲಿ ಕಮೆಂಟನ್ನು ಪೇಸ್ಟ್ ಮಾಡಿರಿ..